Krishnadwaipayana Teertharu
ಇಂದು ಪ್ರಾತಃ ಸ್ಮರಣೀಯರಾದ ಶ್ರೀ ಕೃಷ್ಣದ್ವಯಪಾಯನ ತೀರ್ಥರ ಅವರ ಸ್ಮರಣೆ ಮಾಡಿ ಹರಿವಾಯುಗುರುಗಳ ಅನುಗ್ರಹಕ್ಕೆ ಪಾತ್ರರಾಗೋಣ ಇವರ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಲಭ್ಯವಿಲ್ಲದಿದ್ದರು ಇವರ ಶಿಷ್ಯರ ಹಾಗೂ ಹರಿದಾಸರ ಕೃತಿಗಳಲ್ಲಿ ಗುರುಗಳ ವ್ಯಕ್ತಿತ್ವ ವರ್ಚಸ್ಸು ಮಹಿಮೆಗಳು ತಿಳಿಯುತ್ತವೆ ಇವರ ಜನನ ಸುಮಾರು 1619-1669 ಇರಬಹುದು ಶ್ರೀ ಉತ್ತರಾದಿ ಮಠದ ಶ್ರೀ ವೇದವ್ಯಾಸ ತೀರ್ಥರಿಂದ ಯತ್ಯಾಶ್ರಮ ಸ್ವೀಕಾರ ಮಾಡಿದ ಮಹಾನುಭಾವರು ಪೂರ್ವಾಶ್ರಮದಲ್ಲಿ ಎಂದು ವರ್ಷದ ಬಾಲಕರಿರುವಾಗಲೇ ಮಹಾಬಲೇಶ್ವರ ಶ್ರೀ ಕೃಷ್ಣಾನದಿಯ ಉಗಮ ಸ್ಥಾನದಲ್ಲಿ ಪ್ರವಾಹವು ತುಂಬಿ ಹರಿಯುತ್ತಿರುವಾಗ ನದಿಯನ್ನು ದಾಟುವ ಛಲದಿಂದ ಈಜು ಬಿದ್ದರು ಪ್ರವಾಹದ ಸೆಳತಕ್ಕೆ ಕೈಸೊತು ಶ್ರೀ ರಾಮಚಂದ್ರನ ಸ್ಮರಿಸುತ್ತ ನದಿಯನ್ನು ದಾಟಿ ಭವ ಸಾಗರದ ದಡವನ್ನು ಹರಿಸ್ಮರಣೆಯಿಂದ ದಾಟಿ ಭಕುತರನ್ನು ದಾಟಿಸಿದ ಮಹಾನುಭಾವರು ತಾವು ಉಪಾಸನಾ ಗೈಯುತ್ತಿದ್ದ ಭೀಮಾನದಿಯ ಕೂಸುಮೂರ್ತಿಯಲ್ಲಿ ಕೃಷ್ಣಾ ಸಂಗಮದ ಪರಿಯಂತ ಸುಮಾರು ಐದಾರು ಮೈಲು ಪ್ರದೇಶದಲ್ಲಿ ಸುಂದರವಾದ ತೆಂಗಿನ ತೋಟಗಳನ್ನು ನಿರ್ಮಿಸಿ ತಮ್ಮ ತಪೋಮಯ ಸಾಧನಗಮ್ಯವಾದ ಶ್ರೀವರಾಹದೇವರಿಗೆ ವಿಹಾರಾರ್ಥವಾಗಿ ವ್ಯವಸ್ಥೆ ಮಾಡಿದ್ದರು ಅಷ್ಟೇ ಅಲ್ಲದೆ ತೈಲಾಭ್ಯಂಗಾರ್ಥವಾಗಿ ವರಾಹ ದೇವರನ್ನು ಆಹ್ವಾನಿಸುತ್ತಿದ್ದರು ಇಲ್ಲಿ ಭೀಮಾನದಿ ದಕ್ಷಿಣಾಭಿಮುಖವಾಗಿ ಹರಿಯುತ್ತಿರುವುದು ಇಲ್ಲಿಯ ಮತ್ತೋಂದು ವಿಶೇಷ ಇವರ ಭವ್ಯವ...