Sripadarajara Suladi
ಶ್ರೀ ವಿಜಯದಾಸಾರ್ಯ ವಿರಚಿತ ಶ್ರೀಪಾದರಾಜರ ಸ್ತೋತ್ರ ಸುಳಾದಿ
ತಂ ವಂದೇ ನರಸಿಂಹತೀರ್ಥನಿಲಯಂ
ಶ್ರೀ ವ್ಯಾಸರಾಟ್ ಪೂಜಿತಂ।
ಧ್ಯಾಯಂತಂ ಮನಸಾ ನರಸಿಂಹಚರಣಮ್
ಶ್ರೀಪಾದರಾಜ ಗುರುಂ॥
ರಾಗ : ತೋಡಿ
ಧ್ರುವತಾಳ
ಶ್ರೀಪಾದರಾಯ ಗುರುವೆ ಧೃಢಭಕುತಿಯಿಂದ ನಿಮ್ಮ
ಶ್ರೀಪಾದದ್ರುಮವನ್ನು ನೆರೆನಂಬಿದವನ ಭಾಗ್ಯ
ಆಪಾರವಲ್ಲದೆ ಲೇಶ ಕೊರತೆ ಇಲ್ಲ
ಗೋಪಾದ ಉದಕದೊಳು ರತುನ ದೊರಕಿದಂತೆ
ಪ್ರಾಪುತವಾಗುವದು ಬಾಹೀರಂತರ ಸೌಖ್ಯ
ಲೋಪವಾಗದು ಒಂದು ಇಷ್ಟಾರ್ಥ ಪ್ರತಿದಿನ
ಆಪಾರ್ಥ ಎನಿಸದು ಪೇಳಿದ ವಚನಂಗಳು
ಆಪವರ್ಗಕೆ ಮಾರ್ಗ ಕೇವಲ ಖ್ಯಾತಿಯಾಗಿ
ತಾಪಸಿಯಾಗುವನು ಜನುಮ ಜನುಮವು ಬಿಡದೆ
ಗೋಪಾಲಕೃಷ್ಣನ ಗುಣವೆ ಕೊಂಡಾಡುತ
ಆಪಾದಮೌಳಿ ಪರಿಯಂತ ನೋಡುವ ಮಹ -
ಪಾಪ ರಹಿತರಾಗಿ ಸಂಚರಿಸುವರು ನಿತ್ಯ
ಪ್ರಾಪುತವಲ್ಲದೆ ಒಂದಾದರವರಿಗೆ
ಭೂಪಾರ ಬೇಡಿದ ಮನೋರಥಂಗಳು
ಶ್ರೀಪಾದರಾಯ ಶಿರಿ ನಾರಾಯಣ ಯೋಗಿ
ಈಪರಿ ಸ್ಮರಿಸಿದ ಜನರ ಸಂಗದಲ್ಲಿದ್ದ
ಆ ಪುಣ್ಯಪುರುಷನಿಗೆ ಕೈವಲ್ಯ ಇದ್ದಲ್ಲಿಗೆ
ಪೋಪಾದಲ್ಲದೆ ಅವನ ಆಯುಷ್ಯ ವ್ಯರ್ಥವಾಗಿ
ಭಾಪು ಇವರ ಬಿರುದು ಪೊತ್ತು ತಿರುಗಿದರೆ
ಶಾಪಾದಪಿ ಶರಾದಪಿ ಎನಿಸಿಕೊಂಬ
ದೀಪದ ಬೆಳಕಿನಲ್ಲಿ ಸರ್ವವು ಕಂಡಂತೆ
ವ್ಯಾಪುತದರ್ಶಿಯಾಗಿ ಯೋಗ್ಯತದಂತೆ ಕಾಂಬ
ದ್ವಿಪಾದ ಪಶುಗಾಣೊ ಈ ಮುನಿಯ ನಂಬದವ
ಕೂಪಾರವೆಂಬ ಮಹ ಘೋರದೊಳಗೆ ಇಪ್ಪ
ಆಪತ್ಕಾಲ ಬತ್ತಿ ವಿಜಯವಿಠ್ಠಲರೇಯನ
ವ್ಯಾಪಾರವನ್ನೆ ನೆನೆದು ನಲಿನಲಿದಾಡುವ ॥ 1 ॥
ಮಟ್ಟತಾಳ
ಭಕುತಿ ಬೇಕಾದವರು ಇವರ ಪಾದದಲ್ಲಿ
ಸಕಲಕ್ಕಾಗೆ ಇದೇ ಸಾಧ್ಯವೆ ನಮಗೆಂದಾ -
ಸಕುತನಾಗಲಿ ಬೇಕು ರಾಗಂಗಳ ತೊರೆದು
ಮುಕುತಿ ಮಾರ್ಗಕೆ ಇನ್ನು ಯಾತಕೆ ಅನುಮಾನ
ಕಕ್ಕುಲಾತಿಯಿಂದ ಕಂಡಲ್ಲಿ ತಿರುಗಿ
ಹಕ್ಕಲ ಮನಸಿನಲ್ಲಿ ಕೆಟ್ಟು ಪೋಗದಿರಿ
ಲಕುಮಿರಮಣ ನಮ್ಮ ವಿಜಯವಿಠ್ಠಲರೇಯನ
ಭಕುತರೊಳಗೆ ಮಹಮಹಿಮ ಎನಿಸಿಕೊಂಬಾ ॥ 2 ॥
ತ್ರಿವಿಡಿತಾಳ
ನಂಬಿರೋ ಶ್ರೀಪಾದರಾಯರ ಚರಣವ
ಹಂಬಲಿಸದಿರಿ ಅನ್ಯಮಾರ್ಗ
ತುಂಬಿ ತುಳುಕುತಿಪ್ಪದು ಇಹಪರದ ಭಾಗ್ಯ
ಉಂಬುವದುಡುವದು ಅಡಿಗಡಿಗೆ
ಡಿಂಬದೊಳಗೆ ಹರಿಯ ಧ್ಯಾನಂಗತವಾಗಿ
ಕಾಂಬುವ ಲೇಶ ಪಾಪಂಗಳಿಲ್ಲದೆ
ಗಂಭೀರ ಸಂಸಾರವಾದುದು ಅದೆ ಅವಗೆ
ಇಂಬುಗೊಡುವದು ವೈದಿಕವೆನಿಸಿ
ಅಂಬುಜಸಖ ತೇಜ ವಿಜಯವಿಠ್ಠಲರೇಯನ
ಬೆಂಬಿಡದೆ ಭಜಿಸಬೇಕು ಈ ಪರಿಯಲ್ಲಿ ॥ 3 ॥
ಅಟ್ಟತಾಳ
ಇವರ ಪ್ರಸಾದವಾದರೆ ವ್ಯಾಸಮುನಿರಾಯ
ಕವಿರಾಯ ಪುರಂದರದಾಸರು ಮೊದಲಾ -
ದವರ ಕರುಣವನ್ನು ಸಿದ್ಧಿಸುವದು ಕೇಳಿ
ನವಭಕುತಿ ಪುಟ್ಟುವದು ವ್ಯಕ್ತವಾಗಿ
ತವಕದಿಂದಲಿ ಚರ್ಮ ದೇಹ ಬರುವುದು
ದಿವಿಜರು ಒಲಿದು ಸತ್ಕರ್ಮ ಮಾಡಿಸುವರು
ಅವಿರುದ್ಧರಾದ ಜನರೆಲ್ಲ ನೆರೆದು ಭಾ -
ಗ್ಯವನು ಬರಲಿ ಎಂದು ಕೊಂಡಾಡುವರು ನಿತ್ಯ
ಶ್ರವಣಕ್ಕೆ ತೋರುವ ವಿಜಯವಿಠ್ಠಲರೇಯನ
ದಿವರಾತ್ರಿಯಲಿ ನೋಡಿ ಸುಜನರ ಕೂಡುವಾ ॥ 4 ॥
ಆದಿತಾಳ
ನರಕ ನರಕದಲ್ಲಿ ಹೊರಳುವ ಆ ಮನುಜ
ಧರೆಯೊಳು ಇವರ ಚರಿತೆ ಒಂದೊಂದದ್ಭುತವಾಗಿ
ನಿರುತದಲ್ಲಿ ನೋಡೆ ತುಂಬಿ ಸೂಸುತಲಿದೆ
ಅರುಣೋದಯದಲೆದ್ದು ಶ್ರೀಪಾದರಾಯರೆಂದು
ಸ್ಮರಿಸಿದ ಮಾನವಂಗೆ ಸರ್ವ ಸಾಧನದಿಂದ
ಪರಮಗತಿ ಆದಂತೆ ಆಗುವದು ಸಿದ್ಧ
ಪರಿಹಾಸವಲ್ಲ ಕೇಳಿ ಅನುಭವ ತಿಳಿದವಗೆ
ಸುರ ಭೂಸುರರ ಪ್ರಿಯ ವಿಜಯವಿಠ್ಠಲನ
ಕರುಣದಿಂದಲಿ ಮಹ ಉನ್ನತದಲ್ಲಿಪ್ಪರೂ ॥ 5 ॥
ಜತೆ
ಧ್ರುವ ಮರಿಯದಲೆ ಇದನೆ ಓದಿದವಗೆ ಬಂದ
ತಂ ವಂದೇ ನರಸಿಂಹತೀರ್ಥನಿಲಯಂ
ಶ್ರೀ ವ್ಯಾಸರಾಟ್ ಪೂಜಿತಂ।
ಧ್ಯಾಯಂತಂ ಮನಸಾ ನರಸಿಂಹಚರಣಮ್
ಶ್ರೀಪಾದರಾಜ ಗುರುಂ॥
ರಾಗ : ತೋಡಿ
ಧ್ರುವತಾಳ
ಶ್ರೀಪಾದರಾಯ ಗುರುವೆ ಧೃಢಭಕುತಿಯಿಂದ ನಿಮ್ಮ
ಶ್ರೀಪಾದದ್ರುಮವನ್ನು ನೆರೆನಂಬಿದವನ ಭಾಗ್ಯ
ಆಪಾರವಲ್ಲದೆ ಲೇಶ ಕೊರತೆ ಇಲ್ಲ
ಗೋಪಾದ ಉದಕದೊಳು ರತುನ ದೊರಕಿದಂತೆ
ಪ್ರಾಪುತವಾಗುವದು ಬಾಹೀರಂತರ ಸೌಖ್ಯ
ಲೋಪವಾಗದು ಒಂದು ಇಷ್ಟಾರ್ಥ ಪ್ರತಿದಿನ
ಆಪಾರ್ಥ ಎನಿಸದು ಪೇಳಿದ ವಚನಂಗಳು
ಆಪವರ್ಗಕೆ ಮಾರ್ಗ ಕೇವಲ ಖ್ಯಾತಿಯಾಗಿ
ತಾಪಸಿಯಾಗುವನು ಜನುಮ ಜನುಮವು ಬಿಡದೆ
ಗೋಪಾಲಕೃಷ್ಣನ ಗುಣವೆ ಕೊಂಡಾಡುತ
ಆಪಾದಮೌಳಿ ಪರಿಯಂತ ನೋಡುವ ಮಹ -
ಪಾಪ ರಹಿತರಾಗಿ ಸಂಚರಿಸುವರು ನಿತ್ಯ
ಪ್ರಾಪುತವಲ್ಲದೆ ಒಂದಾದರವರಿಗೆ
ಭೂಪಾರ ಬೇಡಿದ ಮನೋರಥಂಗಳು
ಶ್ರೀಪಾದರಾಯ ಶಿರಿ ನಾರಾಯಣ ಯೋಗಿ
ಈಪರಿ ಸ್ಮರಿಸಿದ ಜನರ ಸಂಗದಲ್ಲಿದ್ದ
ಆ ಪುಣ್ಯಪುರುಷನಿಗೆ ಕೈವಲ್ಯ ಇದ್ದಲ್ಲಿಗೆ
ಪೋಪಾದಲ್ಲದೆ ಅವನ ಆಯುಷ್ಯ ವ್ಯರ್ಥವಾಗಿ
ಭಾಪು ಇವರ ಬಿರುದು ಪೊತ್ತು ತಿರುಗಿದರೆ
ಶಾಪಾದಪಿ ಶರಾದಪಿ ಎನಿಸಿಕೊಂಬ
ದೀಪದ ಬೆಳಕಿನಲ್ಲಿ ಸರ್ವವು ಕಂಡಂತೆ
ವ್ಯಾಪುತದರ್ಶಿಯಾಗಿ ಯೋಗ್ಯತದಂತೆ ಕಾಂಬ
ದ್ವಿಪಾದ ಪಶುಗಾಣೊ ಈ ಮುನಿಯ ನಂಬದವ
ಕೂಪಾರವೆಂಬ ಮಹ ಘೋರದೊಳಗೆ ಇಪ್ಪ
ಆಪತ್ಕಾಲ ಬತ್ತಿ ವಿಜಯವಿಠ್ಠಲರೇಯನ
ವ್ಯಾಪಾರವನ್ನೆ ನೆನೆದು ನಲಿನಲಿದಾಡುವ ॥ 1 ॥
ಮಟ್ಟತಾಳ
ಭಕುತಿ ಬೇಕಾದವರು ಇವರ ಪಾದದಲ್ಲಿ
ಸಕಲಕ್ಕಾಗೆ ಇದೇ ಸಾಧ್ಯವೆ ನಮಗೆಂದಾ -
ಸಕುತನಾಗಲಿ ಬೇಕು ರಾಗಂಗಳ ತೊರೆದು
ಮುಕುತಿ ಮಾರ್ಗಕೆ ಇನ್ನು ಯಾತಕೆ ಅನುಮಾನ
ಕಕ್ಕುಲಾತಿಯಿಂದ ಕಂಡಲ್ಲಿ ತಿರುಗಿ
ಹಕ್ಕಲ ಮನಸಿನಲ್ಲಿ ಕೆಟ್ಟು ಪೋಗದಿರಿ
ಲಕುಮಿರಮಣ ನಮ್ಮ ವಿಜಯವಿಠ್ಠಲರೇಯನ
ಭಕುತರೊಳಗೆ ಮಹಮಹಿಮ ಎನಿಸಿಕೊಂಬಾ ॥ 2 ॥
ತ್ರಿವಿಡಿತಾಳ
ನಂಬಿರೋ ಶ್ರೀಪಾದರಾಯರ ಚರಣವ
ಹಂಬಲಿಸದಿರಿ ಅನ್ಯಮಾರ್ಗ
ತುಂಬಿ ತುಳುಕುತಿಪ್ಪದು ಇಹಪರದ ಭಾಗ್ಯ
ಉಂಬುವದುಡುವದು ಅಡಿಗಡಿಗೆ
ಡಿಂಬದೊಳಗೆ ಹರಿಯ ಧ್ಯಾನಂಗತವಾಗಿ
ಕಾಂಬುವ ಲೇಶ ಪಾಪಂಗಳಿಲ್ಲದೆ
ಗಂಭೀರ ಸಂಸಾರವಾದುದು ಅದೆ ಅವಗೆ
ಇಂಬುಗೊಡುವದು ವೈದಿಕವೆನಿಸಿ
ಅಂಬುಜಸಖ ತೇಜ ವಿಜಯವಿಠ್ಠಲರೇಯನ
ಬೆಂಬಿಡದೆ ಭಜಿಸಬೇಕು ಈ ಪರಿಯಲ್ಲಿ ॥ 3 ॥
ಅಟ್ಟತಾಳ
ಇವರ ಪ್ರಸಾದವಾದರೆ ವ್ಯಾಸಮುನಿರಾಯ
ಕವಿರಾಯ ಪುರಂದರದಾಸರು ಮೊದಲಾ -
ದವರ ಕರುಣವನ್ನು ಸಿದ್ಧಿಸುವದು ಕೇಳಿ
ನವಭಕುತಿ ಪುಟ್ಟುವದು ವ್ಯಕ್ತವಾಗಿ
ತವಕದಿಂದಲಿ ಚರ್ಮ ದೇಹ ಬರುವುದು
ದಿವಿಜರು ಒಲಿದು ಸತ್ಕರ್ಮ ಮಾಡಿಸುವರು
ಅವಿರುದ್ಧರಾದ ಜನರೆಲ್ಲ ನೆರೆದು ಭಾ -
ಗ್ಯವನು ಬರಲಿ ಎಂದು ಕೊಂಡಾಡುವರು ನಿತ್ಯ
ಶ್ರವಣಕ್ಕೆ ತೋರುವ ವಿಜಯವಿಠ್ಠಲರೇಯನ
ದಿವರಾತ್ರಿಯಲಿ ನೋಡಿ ಸುಜನರ ಕೂಡುವಾ ॥ 4 ॥
ಆದಿತಾಳ
ನರಕ ನರಕದಲ್ಲಿ ಹೊರಳುವ ಆ ಮನುಜ
ಧರೆಯೊಳು ಇವರ ಚರಿತೆ ಒಂದೊಂದದ್ಭುತವಾಗಿ
ನಿರುತದಲ್ಲಿ ನೋಡೆ ತುಂಬಿ ಸೂಸುತಲಿದೆ
ಅರುಣೋದಯದಲೆದ್ದು ಶ್ರೀಪಾದರಾಯರೆಂದು
ಸ್ಮರಿಸಿದ ಮಾನವಂಗೆ ಸರ್ವ ಸಾಧನದಿಂದ
ಪರಮಗತಿ ಆದಂತೆ ಆಗುವದು ಸಿದ್ಧ
ಪರಿಹಾಸವಲ್ಲ ಕೇಳಿ ಅನುಭವ ತಿಳಿದವಗೆ
ಸುರ ಭೂಸುರರ ಪ್ರಿಯ ವಿಜಯವಿಠ್ಠಲನ
ಕರುಣದಿಂದಲಿ ಮಹ ಉನ್ನತದಲ್ಲಿಪ್ಪರೂ ॥ 5 ॥
ಜತೆ
ಧ್ರುವ ಮರಿಯದಲೆ ಇದನೆ ಓದಿದವಗೆ ಬಂದ
ಭವರೋಗ ಪರಿಹಾರ ವಿಜಯವಿಠ್ಠಲ ವಲಿವಾ ॥
Comments
Post a Comment